ಕೊಪ್ಪಳ : ಪ್ರತಿವಾರದಂತೆ ಈ ವಾರವೂ ಕವಿಸಮಯ ಕಾರ್ಯಕ್ರಮವನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಪ್ರತಿ ರವಿವಾರ ಸಂಜೆ ಜರುಗುವ ಕಾರ್ಯಕ್ರಮದಲ್ಲಿ ಕವಿಗಳು ತಮ್ಮ ಸ್ವಂತ ಕವಿತೆ/ಚುಟುಕು/ಶಾಯಿರಿ/ಗಜಲ್ ಗಳನ್ನು ವಾಚಿಸುವರು ,ಓದಿದ ಕವಿತೆಗಳ ಕುರಿತು ಉಪಸ್ಥಿತರಿರುವ ಹಿರಿಯ ಕವಿಗಳು ವಿಮರ್ಶಿಸುವರು.
ಶ್ರೀಮತಿ ಅರುಣಾ ನರೇಂದ್ರ ವಾರದ ಅತಿಥಿಯಾಗಿ ಆಗಮಿಸಲಿದ್ದಾರೆ.
ಕವಿಸಮೂಹದಲ್ಲಿ ಈ ವಾರ ಶ್ರೀಮತಿ ಅರುಣಾ ನರೇಂದ್ರ ಕಾವ್ಯ,ಸಾಹಿತ್ಯ ಕುರಿತು ಚರ್ಚೆ ಮತ್ತು ಸಂವಾದ ನಡೆಯಲಿದೆ.
ಈ ಕವಿ ಸಮಯ ಕಾರ್ಯಕ್ರಮ ರವಿವಾರ ೨೮-೧೧-೨೦೧೦ ರಂದು ನಗರದ ಪ್ರವಾಸಿ ಮಂದಿರದಲ್ಲಿ ಕವಿ ಸಮಯ ಸಂಜೆ ೪-೩೦ ಗಂಟೆಗೆ ಜರುಗಲಿದೆ. ಆಸಕ್ತರು ಮತ್ತು ಕವಿಗಳು ಭಾಗವಹಿಸಲು ಕವಿಸಮೂಹ ವಿನಂತಿಸಿದೆ. ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಶಿ.ಕಾ.ಬಡಿಗೇರ ೯೦೩೬೨೬೫೦೩೭ ಸಂಪರ್ಕಿಸಿ
No comments:
Post a Comment